ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ತಿಳಿಸುತ್ತಿರುವ ವಿಷಯವೆಂದರೆ ಸರ್ಕಾರವು ಕೋವಿಡ್ ಟೆಸ್ಟ್ ಬಗ್ಗೆ ಹೊಸ ಆದೇಶ ಹೊರಡಿಸಿರುವುದನ್ನು. ಇಡೀ ದೇಶ ಹಾಗೂ ವಿಶ್ವವನ್ನೇ ಸಂಕಷ್ಟಕ್ಕೆ ದೂಡಿ ಜನರ ಜೀವನದ ಜೊತೆ ಕಳೆದ ಎರಡು ಮೂರು ವರ್ಷಗಳ ಹಿಂದೆ ಆಟವಾಡಿದ ಕರೋನ ಮತ್ತೆ ಇದೀಗ ರಾಜ್ಯಕ್ಕೆ ಎಂಟ್ರಿ ಕೊಟ್ಟಿದ್ದು ಪ್ರಕರಣಗಳು ಸದ್ಯಕ್ಕೆ ರಾಜ್ಯದಲ್ಲಿ ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಮಹತ್ವದ ಕ್ರಮವನ್ನು ಕೈಗೊಂಡಿದ್ದು ಅದರ ಸಂಪೂರ್ಣ ಮಾಹಿತಿಯನ್ನು ಇದೀಗ ನೀವು ನೋಡಬಹುದು.
ಸೋಂಕು ಕಾಣಿಸಿಕೊಂಡರೆ ಟೆಸ್ಟ್ ಕಡ್ಡಾಯ :
ಬೆಂಗಳೂರಿನ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಂಪುಟ ಉಪ ಸಮಿತಿ ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರ ಅಧ್ಯಕ್ಷತೆಯಲ್ಲಿ ಕರೋನ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಕೆಲವೊಂದು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಕೋವಿಡ್ ರೋಗಲಕ್ಷಣಗಳು ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲಿ ಕಾಣಿಸಿಕೊಂಡರೆ ಕಡ್ಡಾಯವಾಗಿ ಟೆಸ್ಟಿಂಗ್ ಅನ್ನು ನಡೆಸಬೇಕಾಗುತ್ತದೆ. ವೈದ್ಯರು ಹೋಂ ಐಸುಲೇಶನ್ ನಲ್ಲಿರುವ 400 ಕೋವಿಡ್ ಸೋಂಕಿತರ ಮನೆಗಳಿಗೆ ಭೇಟಿ ನೀಡಿ ಇದರ ಬಗ್ಗೆ ನಿಗ ವಹಿಸಲು ಸೂಚನೆಗಳನ್ನು ನೀಡಬೇಕು.
ಇದನ್ನು ಓದಿ : ಲ್ಯಾಪ್ಟಾಪ್ ಕೇವಲ 10,000 ಸಾವಿರ ದಿಂದ 20,000 ಕ್ಕೆ ಸಿಗಲಿದೆ : ಕೂಡಲೇ ಭೇಟಿ ನೀಡಿ
ಪ್ರತಿನಿತ್ಯ 5000 ಕೋವಿಡ್ ಟೆಸ್ಟಿಂಗ್ :
ಕಡ್ಡಾಯವಾಗಿ ಸೋಂಕಿತರ ಪ್ರಾಥಮಿಕ ಸಂಪರ್ಕಿಸರಲ್ಲಿ ಕೋವಿಡ್ ರೋಗಲಕ್ಷಣಗಳು ಏನಾದರೂ ಕಾಣಿಸಿಕೊಂಡರೆ ಟೆಸ್ಟಿಂಗ್ ನಡೆಸಬೇಕು. ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಮೇಲೆ ಹೆಚ್ಚಿನ ನಿಗ ವಹಿಸಬೇಕೆಂದು ಸರ್ಕಾರ ಸೂಚನೆ ನೀಡಿದೆ. ಪ್ರತಿನಿತ್ಯ 5000 ಕೋವಿಡ್ ಟೆಸ್ಟಿಂಗ್ ನಡೆಸಲು ಇಂದಿನಿಂದ ವೆಂಟಿಲೇಟರ್ ಆಕ್ಸಿಜನ್ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಸಭೆಯಲ್ಲಿ ನಾಲ್ಕು ಮೊಬೈಲ್ ಆಕ್ಸಿಜನ್ ಕಂಟೆಂಟರ್ಗಳ ಖರೀದಿ ಮಾಡಲು ನಿರ್ಧರಿಸುವ ಮೂಲಕ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಹೀಗೆ ರಾಜ್ಯದಲ್ಲಿ ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು ವೈದ್ಯರಿಗೆ ಈ ಬಗ್ಗೆ ಹೆಚ್ಚಿನ ನಿಗ ವಹಿಸುವಂತೆ ಸೂಚನೆ ನೀಡಲಾಗಿದೆ. ಹೀಗೆ ಕೋವಿಡ್ ಹೆಚ್ಚಾಗುತ್ತಿರುವ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರಿಲ್ಲರಿಗೂ ಶೇರ್ ಮಾಡಿ ಅವರು ಕೂಡ ಎಚ್ಚರಿಕೆಯಿಂದ ಇರಲಿ ಧನ್ಯವಾದಗಳು.
ಇತರೆ ವಿಷಯಗಳು :
- ಸರ್ಕಾರಿ ಜಮೀನು ಸ್ವಂತ ಮಾಡಿಕೊಳ್ಳಲು ರೈತರಿಗೆ ಅವಕಾಶ : ಭೂಮಿ ಇಲ್ಲದವರು ಈ ಕೂಡಲೇ ಅರ್ಜಿ ಸಲ್ಲಿಸಲು ಕೋರಲಾಗಿದೆ
- UPI ನಿಯಮಗಳಲ್ಲಿ ಜನವರಿ ಬದಲಾವಣೆ ಆಗಿದೆ ನೋಡಿ , ಪ್ರತಿಯೊಬ್ಬರು ಶುಲ್ಕ ಪಾವತಿ ಇದೆ