ನಮಸ್ಕಾರ ಸ್ನೇಹಿತರೆ ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಸಾಮಾನ್ಯವಾಗಿ ಉತ್ತಮ ಬದುಕನ್ನು ಕಟ್ಟಿಕೊಡುವ ಆಸೆಯನ್ನು ಹೊಂದಿರುತ್ತಾರೆ ಹಾಗಾಗಿ ಅವರು ಹೆಚ್ಚಾಗಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಗಮನ ನೀಡುತ್ತಾರೆ. ಅದೆಷ್ಟೋ ಬಡ ಕುಟುಂಬದ ಮಕ್ಕಳು ನಮ್ಮ ದೇಶದಲ್ಲಿ ಆರ್ಥಿಕ ಸಮಸ್ಯೆ ಇರುವುದರಿಂದ ತಮ್ಮ ಶಿಕ್ಷಣವನ್ನು ಅರ್ಥಕ್ಕೆ ಕೈ ಬಿಟ್ಟು ಕೆಲಸವನ್ನು ಮಾಡಲು ಪ್ರಾರಂಭಿಸುತ್ತಾರೆ. ಹಾಗಾಗಿ ಇಂತಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ರತನ್ ಟಾಟಾ ರವರು ವಿದ್ಯಾರ್ಥಿವೇತನವನ್ನು ನೀಡುವ ಮೂಲಕ ಉನ್ನತ ಶಿಕ್ಷಣವನ್ನು ಪ್ರಾರಂಭಿಸಲು ಆರ್ಥಿಕ ಸಹಾಯವನ್ನು ನೀಡುತ್ತಿದ್ದಾರೆ.

ಟಾಟಾ ಎ ಐ ಎ ಲೈಫ್ ಇನ್ಶುರೆನ್ಸ್ ಕಂಪನಿ :
ಪ್ರತಿಭಾವಂತ ಮತ್ತು ಹಿಂದುಳಿದ ವಿದ್ಯಾರ್ಥಿಗಳಿಗೆ ಟಾಟಾ ಎಐಎ ಲೈಫ್ ಇನ್ಸೂರೆನ್ಸ್ ಕಂಪನಿಯು ಶೈಕ್ಷಣಿಕ ಮತ್ತು ಆರ್ಥಿಕ ಸಹಾಯಕ್ಕಾಗಿ ವಿದ್ಯಾರ್ಥಿ ವೇತನವನ್ನು ನೀಡಲು ಪ್ರಾರಂಭಿಸಿದೆ. ಶಿಕ್ಷಣವನ್ನು ಅರ್ಹ ವಿದ್ಯಾರ್ಥಿಗಳು ಪಡೆದು ಕೆಲಸವನ್ನು ಪಡೆದುಕೊಳ್ಳಬಹುದಾಗಿದೆ.
ಈ ವಿದ್ಯಾರ್ಥಿ ವೇತನವನ್ನು ಪಡೆಯಲು ಯಾರೆಲ್ಲಾ ಅರ್ಹರಿರುತ್ತಾರೆ :
ಕಮರ್ಷಿಯಲ್ ಎಕನಾಮಿಕ್ಸ್ ಅಕೌಂಟಿಂಗ್, ಇನ್ಶೂರೆನ್ಸ್ ಮ್ಯಾನೇಜ್ಮೆಂಟ್ ಮ್ಯಾನೇಜ್ಮೆಂಟ್ ಮತ್ತು ಫೈನಾನ್ಸ್, ಡಾಟಾ ಸೈನ್ಸ್, ಬ್ಯಾಂಕಿಂಗ್, ಪಿಜಿ ಡಿಪ್ಲೋಮಾ ಕೋರ್ಸ್, ಇತರ ವೃತ್ತಿಪರ ಕ್ಷೇತ್ರಗಳಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳನ್ನು ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ರತನ್ ಟಾಟಾ ಕಡೆಯಿಂದ 25000 ವಿದ್ಯಾರ್ಥಿ ವೇತನವನ್ನು ಪಡೆಯಬಹುದಾಗಿದೆ.
ಇದನ್ನು ಓದಿ : ಸರ್ಕಾರದ ಭೂಮಿ ಒತ್ತುವರಿ ಮಾಡಿದವರಿಗೆ ಕಠಿಣ ಕ್ರಮ ಜಾರಿ : ಕೂಡಲೇ ಈ ಕೆಲಸ ಮಾಡಿ
ಈ ವಿದ್ಯಾರ್ಥಿ ವೇತನವನ್ನು ಪಡೆಯಬೇಕಾದರೆ ಅರ್ಜಿಯನ್ನು ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 50% ಅಂಕಗಳನ್ನು ಹಿಂದಿನ ತರಗತಿಯಲ್ಲಿ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು ಎಲ್ಲ ಮೂಲಗಳಿಂದ 5 ಲಕ್ಷಕ್ಕಿಂತ ಕಡಿಮೆ ಇರಬೇಕು. ರತನ್ ಟಾಟಾ ರವರು ನೀಡುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಹೆಚ್ಚಿನ ಆದ್ಯತೆಯನ್ನು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಿಕಲಚೇತನರು ಮತ್ತು ಬಾಲಕಿಯರಿಗೆ ಹಿಂದುಳಿದ ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ.
ಹೀಗೆ ರತನ್ ಟಾಟಾ ರವರು ಉನ್ನತ ಶಿಕ್ಷಣವನ್ನು ಕಲ್ಪಿಸುವ ದೇಶದಿಂದ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು ಈ ವಿದ್ಯಾರ್ಥಿ ವೇತನವನ್ನು ಆರ್ಥಿಕವಾಗಿ ಹಿಂದುಳಿದಂತಹ ವಿದ್ಯಾರ್ಥಿಗಳು ಪಡೆದು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಬಹುದಾಗಿದೆ. ಹಾಗಾಗಿ ರತನ್ ಟಾಟಾ ರವರು ನೀಡುತ್ತಿರುವ ಈ ವಿದ್ಯಾರ್ಥಿ ವೇತನದ ಬಗ್ಗೆ ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.
ಇತರೆ ವಿಷಯಗಳು :
- ಮಕ್ಕಳನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರೆ ಎಚ್ಚರಿಕೆ.! ದಂಡ ಕಟ್ಟಬೇಕು
- ಸುಮಾರು 75 ಸಾವಿರ ರೂಪಾಯಿಗಳು ಈ ವಿದ್ಯಾರ್ಥಿಗಳಿಗೆ ಸಿಗಲಿದೆ : ಈ ಲಿಂಕ್ ಬಳಸಿ ಅಪ್ಲೈ ಮಾಡಿ